ಈಚೆಗೆ, ವಿವಿಧ ಇಲಾಖೆಗಳು/ ಸಂಸ್ಥೆಗಳು ಏರ್ಪಡಿಸಿದ ಸ್ಪರ್ಧೆಗಳಲ್ಲಿ ಸೋಮವಾರಪೇಟೆ ಸಮೂಹ ಸಂಪನ್ಮೂಲ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿ ಪ್ರಶಂಸೆಯನ್ನು ಪಡೆದಿದ್ದಾರೆ. ಸಮೂಹ ಸಂಪನ್ಮೂಲ ಕೇಂದ್ರ ಸೋಮವಾರಪೇಟೆಯ ಪರವಾಗಿ ಅವರಿಗೆ ಅಭಿನಂದನೆಗಳು.
****
ಓಜೋ಼ನ್ ದಿನದ ಪ್ರಯುಕ್ತ ನಡೆದ ಸ್ಲೋಗನ್ ಬರೆವಣಿಗೆ ಹಾಗೂ ಪೋಸ್ಟರ್ ತಯಾರಿಯಲ್ಲಿ ಪಾಲ್ಗೊಂಡು ಸ.ಪ.ಪೂ.ಕಾಲೇಜು ಸೋಮವಾರಪೇಟೆಯ ವಿದ್ಯಾರ್ಥಿಗಳಾದ ಪಂಚಮಿ, ಶಿವಾನಿ, ಸಂಜನ,ಸೌಜನ್ಯ- ಇವರು ಭಾರತ ಸರ್ಕಾರದ ಪರಿಸರ ಸಚಿವಾಲಯದಿಂದ ಪ್ರಶಸ್ತಿ ಪತ್ರವನ್ನು ಪಡೆದಿದ್ದಾರೆ.
------------------------------------
ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ಭೌತಿಕ ಸಮಾವೇಶಕ್ಕೆ ಪರ್ಯಾಯವಾಗಿ ಆನ್ಲೈನ್ ಮೂಲಕ “ಸುಸ್ಥಿರ ಜೀವನಕ್ಕಾಗಿ ವಿಜ್ಞಾನ” ಎಂಬ ಕೇಂದ್ರ ವಿಷಯದಡಿ ನಡೆದ ಕೊಡಗು ಜಿಲ್ಲಾ ಮಟ್ಟದ 28ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ-2020 ದಲ್ಲಿ ವಿದ್ಯಾರ್ಥಿಗಳು ಸ್ವತಃ ತಾವೇ ವೈಜ್ಞಾನಿಕ ಯೋಜನಾ ಪ್ರಬಂಧ ತಯಾರಿಸಿ ಉತ್ತಮವಾಗಿ ಪ್ರಬಂಧ ಮಂಡಿಸಿ ರಾಜ್ಯ ಮಟ್ಟದ ಸಮಾವೇಶಕ್ಕೆ ಆಯ್ಕೆಯಾದ OLV ಕಾನ್ವೆಂಟ್ ನ ಕಿರಿಯ ವಿಜ್ಞಾನಿಗಳನ್ನು ನಗರದ ಡಿಡಿಪಿಐ ಕಚೇರಿಯಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪುರಸ್ಕರಿಸಲಾಯಿತು
------------------------------------
67ನೇ ವನ್ಯಜೀವಿ ಸಪ್ತಾಹ ದ ಪ್ರಯುಕ್ತ ಮಡಿಕೇರಿ ವನ್ಯಜೀವಿ ವಿಭಾಗದಿಂದ ಏರ್ಪಡಿಸಿದ್ದ ರಾಜ್ಯ ಮಟ್ಟದ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ 132 ವಿದ್ಯಾರ್ಥಿಗಳು ಭಾಗವಹಿಸಿದ್ದು ಅದರಲ್ಲಿ ಸ.ಪ.ಪೂ.ಕಾಲೇಜು ಸೋಮವಾರಪೇಟೆಯ ವಿದ್ಯಾರ್ಥಿನಿ ಮಾನ್ಯ ಬಿ. ಎಸ್. ಪ್ರೌಢ ಶಾಲಾ ವಿಭಾಗದಲ್ಲಿ ಮೂರನೇ ಸ್ಥಾನ ಪಡೆದಿದ್ದಾಳೆ.
------------------------------------
ಕನ್ನಡ ಸಿರಿ ಕಸಾಪ ಸ್ನೇಹ ಬಳಗ, ಕುಶಾಲನಗರ - ಇವರು ನಡೆಸಿದ ' ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ನಾವು' ಎಂಬ ವಿಷಯದ ಕುರಿತು ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ಕಿಬ್ಬೆಟ್ಟ ಶಾಲೆಯ ವಿಶಾಲಾಕ್ಷಿ ಎಂ.ಪಿ., ಹಾನಗಲ್ಲು ಶೆಟ್ಟಳ್ಳಿ ಶಾಲೆಯ ಮಂಜುನಾಥ್ ಎಸ್ ಮೀಸಿ ಅವರು ಭಾಗವಹಿಸಿ 'ಉತ್ತಮ' ಹಾಗೂ 'ಅತ್ಯುತ್ತಮ' ಎಂಬ ಪ್ರಶಂಸೆಯನ್ನು ಪಡೆದಿದ್ದಾರೆ.








No comments:
Post a Comment